ಜೀವ ಜೀವನವೂ ನಿನದೇ ದೇವಾ
ಅರ್ಪಿಸುವೆ ಶುದ್ಧ ಮನದಿ ಹೂವಾ
ಪರಿಪರಿ ಕಷ್ಟದಲಿ ಬಳಲಿದೆ ಈ ಜೀವಾ
ಬಿಚ್ಚಿಡುವೆ ಮನದಿ ಅಡಗಿದ ನೋವಾ
ಪರಿತಾಪವ ಪರಿಹರಿಸು ನೀ ದೇವಾ
ಸಂತೈಸು ಬಳಲಿರುವ ಈ ಮನವಾ
ಬೇಸರವೀ ಜೀವನದ ಯಾನ
ಸಹಿಸಲಾರೆ ನೀರಸವಾದ ಮೌನ
ಕಂಗಳಲಿ ನೋವಿನದೇ ಕಥನ
ಮನದಿ ಮೂಡಿದೆ ಕಣ್ಣೀರ ಕವನ
ಮೂರು ದಿನದ ನಮ್ಮ ಜೀವನವು
ಆಸೆಯಲೆಯ ಮೇಲೆ ಪಯಣವು
ಅಪರಿಮಿತ ಅಮೂರ್ತ ಭಾವವು
ಭರವಸೆಯಲಿ ಸಾಗುತಿದೆ ಜೀವನವು
ವೇದಾವತಿ ಭಟ್ಟ
ಮುಂಬೈ
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ